KANNADA

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲನೆ

ಬೆಂಗಳೂರು: ಫೆ.11ರಿಂದ 14ರವರೆಗೆ ಇಲ್ಲಿನ ಅರಮನೆ ಮೈದಾನದಲ್ಲಿ ಜರುಗುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಇಲ್ಲಿ ಸಮಗ್ರವಾಗಿ ಪರಿಶೀಲಿಸಿದರು. ಇದನ್ನೂ ಓದಿ: ಕ್ರಿಕೆಟ್‌ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್...‌ ಟೀಂ ಇಂಡಿಯಾಗೆ ಮತ್ತೆ ವಿರಾಟ್‌ ಕೊಹ್ಲಿ ಕ್ಯಾಪ್ಟನ್‌! ʼರಾಜʼನ ಹೆಗಲಿಗೆ ಭಾರತೀಯ ಕ್ರಿಕೆಟ್‌ ರಾಜ್ಯಾಭಾರ!? ಉನ್ನತ ಮಟ್ಟದ ಅಧಿಕಾರಿಗಳ ಜತೆ ಉದ್ಯೋಗ ಮಿತ್ರ ಕಚೇರಿಯಲ್ಲಿ ಸಮಾಲೋಚಿಸಿದ ಅವರು ಸೂಕ್ತ ಸಲಹೆಗಳನ್ನು ನೀಡಿ, ಮುಂದಿನ ವಾರ ಮತ್ತೊಂದು ಸುತ್ತಿನ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶವು ಫೆ.11ರ ಸಂಜೆಯೇ ಉದ್ಘಾಟನೆ ಆಗಲಿದೆ. ಈ ಸಮಾವೇಶವು ಅಭೂತಪೂರ್ವ ರೀತಿಯಲ್ಲಿ ಯಶಸ್ಸು ಗಳಿಸುವ ಸಂಬಂಧ ಪ್ರತಿಯೊಬ್ಬರೂ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ. ಸಮಾವೇಶದಲ್ಲಿ ಯಾವ್ಯಾವ ಗೋಷ್ಠಿಗಳಲ್ಲಿ ಯಾರಾರು ಮಾತನಾಡಬೇಕು ಎನ್ನುವುದನ್ನು ಆಖೈರು ಮಾಡಲಾಗುತ್ತಿದೆ. ಜತೆಗೆ ಅತಿಥಿಗಳಿಗೆ ಕರ್ನಾಟಕದ ಅಸ್ಮಿತೆ ಸಾರುವಂತಹ ರೇಷ್ಮೆ ಸ್ಕಾರ್ಫ್, ಮೈಸೂರು ಸ್ಯಾಂಡಲ್ ಸೋಪ್ ಮುಂತಾದ ವಿಶಿಷ್ಟ ವಸ್ತುಗಳನ್ನು ಉಡುಗೊರೆಯಾಗಿ ನೀಡುವ ಬಗ್ಗೆಯೂ ಚರ್ಚೆಯಾಯಿತು. ಫೆ. 12, 13 ಮತ್ತು 14ರಂದು ಮೂರು ದಿನಗಳ ಕಾಲ ಪೂರ್ಣ ಪ್ರಮಾಣದಲ್ಲಿ ಹಲವು ವಿಚಾರಗಳ ಕುರಿತು ಗೋಷ್ಢಿಗಳು ಮತ್ತು ಹೂಡಿಕೆ ಒಡಂಬಡಿಕೆಗಳು ನಡೆಯಲಿವೆ. ಪ್ರತಿಯೊಂದು ವಿಭಾಗಕ್ಕೂ ಸೂಕ್ತ ಆದ್ಯತೆ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಪಾಟೀಲ ಹೇಳಿದ್ದಾರೆ. ಇದನ್ನೂ ಓದಿ: ಒಂದು ನಿಮಿಷವೂ ಕಾಯಬೇಕಿಲ್ಲ, ಅಪ್ಲೈ ಮಾಡಿದ ತಕ್ಷಣ ಬಿಡುಗಡೆಯಾಗುತ್ತದೆ ಪಿಎಫ್ ಹಣ!ಬ್ಯಾಂಕ್ ನಂತೆ ಇಪಿಎಫ್ ಒ ಕೆಲಸ !ಕೇಂದ್ರ ಸರ್ಕಾರದ ಭರ್ಜರಿ ಯೋಜನೆ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.