KANNADA

"ಹಿಂದುಳಿದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ"

ಬೆಳಗಾವಿ: "ಹಿಂದುಳಿದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಇಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣನ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ. ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಉಪಾಯ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ.ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ನನ್ನನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ಈ ಸಿದ್ದರಾಮಯ್ಯನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಹೇಳಿದರು ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಭಾರಿ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ. ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.