KANNADA

ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

ಹುಬ್ಬಳ್ಳಿ: ನಟ ದರ್ಶನ್ ವಿಚಾರವಾಗಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್​ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅರ್ಹತೆ ಎರಡೂ ಇದ್ದರೂ ನಾಯಕತ್ವ ಪಡೆಯುವಲ್ಲಿ ವಂಚಿತರಾದ ಭಾರತದ 5 ಶ್ರೇಷ್ಠ ಕ್ರಿಕೆಟಿಗರಿವರು ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್​​ಗೆ ರಾಜಾತಿಥ್ಯ ನೀಡುತ್ತಿರವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲವೆಂದು ಕಿಡಿ ಕಾರಿದರು. ದರ್ಶನ್ʼಗೆ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಈಗ ಪೊಲೀಸ್​ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇಷ್ಟು ದಿನ ಸರ್ಕಾರ ಏನು ಕತ್ತೆ ಕಾಯುತ್ತಿತ್ತಾ? ಎಂದು ಪ್ರಶ್ನಿಸಿದ ಜೋಶಿ, ಇದರಲ್ಲಿ ಕೆಲವು ರಾಜಕಾರಣಿಗಳ ಹಸ್ತಕ್ಷೇಪವೂ ಇದೆ ಎಂದು ಆರೋಪಿಸಿದರು. ಇದನ್ನೂ ಓದಿ: "ಕೋಟಿಗಟ್ಟಲೆ ಹಣ ಕೊಡ್ತೀನಿ ಅಂದ್ರು ಬಿಗ್‌ ಬಾಸ್‌ʼಗೆ ಹೋಗಲ್ಲ"- ಬರಲ್ಲ ಬರಲ್ಲ ಅಂತಾ ಭಾರೀ ಡಿಮ್ಯಾಂಡ್‌ ಮಾಡ್ತಿರೋ ಆ ಸೆಲೆಬ್ರಿಟಿ ಯಾರು? ದರ್ಶನ್ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಲು ಪ್ಲ್ಯಾನ್ ಮಾಡಿದಂತಿದೆ. ಇದನ್ನೆಲ್ಲ ನೋಡಿದರೆ ಸರ್ಕಾರವೇ ದರ್ಶನ್ ರಕ್ಷಣೆಗೆ ನಿಂತಂತಿದೆ. ಅನಿಸುತ್ತದೆ. ಸರ್ಕಾರ ಏನೋ ಸಂಚು ಮಾಡುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಶಂಕೆ ವ್ಯಕ್ತಪಡಿಸಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.