KANNADA

ಬೆಳಗ್ಗಿನ ಉಪಾಹಾರವನ್ನ ಸೇವಿಸದಿದ್ರೆ ನೀವು ʼಈʼ ಗಂಭೀರ ಸಮಸ್ಯೆಗಳಿಗೆ ಗುರಿಯಾಗುತ್ತೀರಿ! ಏನೆಂದು ತಿಳಿಯಿರಿ

What happens if we skip morning breakfast: ಉಪಾಹಾರವನ್ನು ರಾಜನಂತೆ, ಮಧ್ಯಾಹ್ನದ ಊಟವನ್ನು ರಾಜಕುಮಾರನಂತೆ ಮತ್ತು ರಾತ್ರಿಯ ಊಟವನ್ನು ಬಡವನಂತೆ ಸೇವಿಸಬೇಕು ಅನ್ನೋ ಮಾತುಗಳನ್ನು ನೀವು ಕೇಳಿರಬೇಕು. ಬೆಳಗಿನ ಉಪಾಹಾರವು ದೇಹಕ್ಕೆ ಶಕ್ತಿಯನ್ನು ನೀಡುವುದು ಮಾತ್ರವಲ್ಲದೆ ಅನೇಕ ಪೋಷಕಾಂಶಗಳನ್ನು ನೀಡುತ್ತದೆ. ಅಂದರೆ ಬೆಳಗಿನ ಉಪಹಾರವು ನಮ್ಮ ಉತ್ತಮ ಆರೋಗ್ಯಕ್ಕೆ ಬಹಳ ಮುಖ್ಯ. ಇದು ತಿಳಿದ ನಂತರವೂ ಅನೇಕರು ಬೆಳಗಿನ ತಿಂಡಿಯನ್ನು ಬಿಡುತ್ತಾರೆ. ಇದರಿಂದ ನೀವು ಗಂಭೀರ ಕಾಯಿಲೆಗೆ ತುತ್ತಾಗಬಹುದು. ಕೆಲವರು ಕಚೇರಿಗೆ, ಇನ್ನೂ ಕೆಲವರು ಕಾಲೇಜಿಗೆ ಹೋಗುವ ಆತುರದಲ್ಲಿ ಬೆಳಗ್ಗೆ ಉಪಹಾರ ಸೇವಿಸುವುದಿಲ್ಲ. ಇಂತಹ ಪರಿಸ್ಥಿತಿಯು ಸಾಂದರ್ಭಿಕವಾಗಿ ಸಂಭವಿಸಿದರೆ ಯಾವುದೇ ತೊಂದರೆಯಿಲ್ಲ. ಆದರೆ ಇದನ್ನು ಪ್ರತಿದಿನವೂ ಮಾಡಿದ್ರೆ ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ದೇಹದಲ್ಲಿ ಅಗತ್ಯ ಪೋಷಕಾಂಶಗಳ ಕೊರತೆಯುಂಟಾಗಿ, ನಿಮ್ಮ ಉತ್ತಮ ಆರೋಗ್ಯ ಕ್ಕೆ ಅಪಾಯವನ್ನು ತರಬಹುದು. ನೀವು ಸಹ ಯಾವುದೋ ಕಾರಣಕ್ಕೆ ಉಪಹಾರವನ್ನು ತ್ಯಜಿಸುತ್ತಿದ್ದರೆ, ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಅನ್ನೋದರ ಬಗ್ಗೆ ತಿಳಿಯಿರಿ... ಇದನ್ನೂ ಓದಿ: ಡಯಟ್‌ ಮಾಡಿದರೂ ತೂಕ ಹೆಚ್ಚಾಗುತ್ತಿದೆಯೇ..? ಅದಕ್ಕೆ ಈ 5 ಕಾರಣಗಳು ಇರಬಹುದು..! ಬೆಳಗಿನ ಉಪಾಹಾರ ಸೇವಿಸದಿದ್ರೆ ಏನಾಗುತ್ತೆ? ಸಕ್ಕರೆಯ ಪ್ರಮಾಣ ಹೆಚ್ಚಾಗಬಹುದು: ಬೆಳಗಿನ ಉಪಾಹಾರ ಸೇವಿಸದಿರುವುದು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಏರುಪೇರುಗಳನ್ನು ಉಂಟುಮಾಡುತ್ತದೆ. ಬೆಳಗ್ಗೆ ಉಪಹಾರ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಉತ್ತಮ ಮತ್ತು ಆರೋಗ್ಯಕರ ಆಹಾರದೊಂದಿಗೆ ದಿನವನ್ನು ಪ್ರಾರಂಭಿಸುವುದು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಅದರ ಸಂಬಂಧಿತ ಸಮಸ್ಯೆಗಳು ಸಹ ಕಡಿಮೆಯಾಗುತ್ತವೆ. ತೂಕ ಹೆಚ್ಚಾಗಲು ಪ್ರಾರಂಭವಾಗುತ್ತ ದೆ: ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ತೂಕ ಹೆಚ್ಚಾಗುವ ಅಪಾಯವೂ ಹೆಚ್ಚಾಗುತ್ತದೆ. ಬೆಳಗ್ಗೆ ಉಪಾಹಾರ ಸೇವಿಸದ ನಂತರ, ನೀವು ಮಧ್ಯಾಹ್ನ ಹೆಚ್ಚು ಆಹಾರವನ್ನು ಸೇವಿಸುತ್ತೀರಿ. ಆದ್ದರಿಂದ ನಿಮ್ಮ ತೂಕ ಹೆಚ್ಚಾಗಬಹುದು. ಇದನ್ನೂ ಓದಿ: ಪ್ರ ತಿದಿನ 10 ನಿಮಿಷಗಳ ಕಾಲ ತೆರೆದ ಗಾಳಿಯಲ್ಲಿ ಕುಳಿತುಕೊಳ್ಳಿ, ನಿಮಗೆ ಈ 5 ಪ್ರಯೋಜನಗಳು ಸಿಗಲಿವೆ..! ರೋಗನಿರೋಧಕ ಶಕ್ತಿ ದುರ್ಬಲವಾಗುತ್ತದೆ: ಬೆಳಗಿನ ಉಪಾಹಾರವನ್ನು ತ್ಯಜಿಸುವುದು ಎಂದರೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವುದು. ರಾತ್ರಿಯ ಊಟ ಮತ್ತು ಬೆಳಗಿನ ಉಪಹಾರದ ನಡುವೆ 7-8 ಗಂಟೆಗಳ ಅಂತರವಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನೀವು ಬೆಳಗ್ಗೆ ಉಪಹಾರ ಸೇವಿಸದಿದ್ರೆ, ಅದು ಜೀವಕೋಶಗಳಿಗೆ ಹಾನಿಯನ್ನುಂಟುಮಾಡುತ್ತದೆ. ಆದ್ದರಿಂದ ನೀವು ಪ್ರತಿರಕ್ಷಣಾ ಕೋಶಗಳನ್ನು ಆರೋಗ್ಯಕರವಾಗಿಡಲು ಬಯಸಿದರೆ ಖಂಡಿತ ಉಪಹಾರವನ್ನು ಸೇವಿಸಬೇಕು. ಚಯಾಪಚಯ ನಿಧಾನವಾಗುತ್ತದೆ: ನೀವು ಬೆಳಗ್ಗೆ ಉಪಾಹಾರ ಸೇವಿಸದಿದ್ದರೆ, ಈ ಕಾರಣದಿಂದ ಚಯಾಪಚಯವು ನಿಧಾನಗೊಳ್ಳಲು ಪ್ರಾರಂಭಿಸುತ್ತದೆ. ಬೆಳಗಿನ ಉಪಾಹಾರವು ನಿಮ್ಮ ಚಯಾಪಚಯವನ್ನು ಹೆಚ್ಚಿಸುತ್ತದೆ. ಅಂದರೆ ನೀವು ಉಪಾಹಾರವನ್ನು ಹೊಂದಿಲ್ಲದಿದ್ದರೆ ಅದು ನಿಧಾನವಾಗಿರುತ್ತದೆ, ಇದರಿಂದ ಕಡಿಮೆ ಕ್ಯಾಲೊರಿ ಗಳನ್ನು ಬರ್ನ್‌ ಮಾಡಲಾಗುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - Apple Link - ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter Link - Facebook Link - Youtube Link - Instagram Link - Sharechat Link - Threads Link- WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. None

About Us

Get our latest news in multiple languages with just one click. We are using highly optimized algorithms to bring you hoax-free news from various sources in India.