ರೇಣುಕಾಸ್ವಾಮಿ-ದರ್ಶನ್ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಹಾಗೂ ಗ್ಯಾಂಗ್ ವಿಚಾರಣೆ ಕೊನೆಯ ಹಂತದಲ್ಲಿದೆ. ಆದರೆ ಇಷ್ಟೆಲ್ಲ ಆದರೂ ಪ್ರಮುಖ ಸಾಕ್ಷಿಯೊಂದು ಮಿಸ್ ಆಗಿದೆಯಾ? ರೇಣುಕಾಸ್ವಾಮಿ ಮೊಬೈಲ್ (Mobile) ಪತ್ತೆಗಾಗಿ ಪೊಲೀಸರು ಅಗ್ನಿಶಾಮಕ ದಳ (Fireforce) ಅಧಿಕಾರಿಗಳ ಮೊರೆ ಹೋಗಿದ್ದರು. ಸತತ 11 ದಿನಗಳಿಂದ ಮೃತ ರೇಣುಕಾಸ್ವಾಮಿ ಮೊಬೈಲ್ ಗಾಗಿ ತೀರ್ವ ಹುಡುಕಾಟ ನಡೆದಿದೆ. ಜೂನ್ 9 ರ ಮುಂಜಾನೆ ಆರೋಪಿ ಪ್ರದೂಶ್ ಮೃತ ರೇಣುಕಾಸ್ವಾಮಿ ಮೊಬೈಲ್ ನ್ನ ಪಡೆದು ಬಿಸಾಡಿದ್ದರು. ಇದು ತನಿಖೆಯಲ್ಲಿ ದೊಡ್ಡ ಸಾಕ್ಷಿಯಾಗುತ್ತಿತ್ತಾ? ಮಿಸ್ ಆಗಿಬಿಡ್ತಾ? ಸುಮನಹಳ್ಳಿಯ ರಾಜಕಾಲುವೆ ಬಳಿ ಮೊಬೈಲ್ ಬಿಸಾಡಿದ್ದಾಗಿ ಆರೋಪಿ ಪ್ರದೂಶ್ ಹೇಳಿಕೆ ನೀಡಿದ್ದ. ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ವೇಳೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಕರಿಸಿದ್ದ ಮಾಹಿತಿ ಇದ್ದು ಇದು ಸಿಗದಿದ್ದರೆ ದೊಡ್ಡ ಸಾಕ್ಷಿ ಮಿಸ್ ಆಗಲಿದೆ ಎನ್ನಲಾಗುತ್ತಿದೆ. ಪ್ರದೂಶ್ ಮೊಬೈಲ್ ಬಿಸಾಡಿದ್ದ ಸುಮನಹಳ್ಳಿ ರಾಜಕಾಲುವೆಯ ಬಳಿ ಪೊಲೀಸರು ಮಹಜರ್ ನಡೆಸಿದ್ದಾರೆ. ಬಿಬಿಎಂಪಿ ಪೌರ ಕಾರ್ಮಿಕರ ಸಹಾಯದಿಂದ ರಾಜಕಾಲುವೆಯಲ್ಲಿ ಮೊಬೈಲ್ ಹುಡುಕಾಡಿಸಿದ್ದ ಪೋಲಿಸರಿಗೆ ಮೊಬೈಲ್ ಮಾತ್ರ ಸಿಕ್ಕಿಲ್ಲ. ಸುಮನಹಳ್ಳಿ ರಾಜಕಾಲುವೆಯಲ್ಲಿ ಎಷ್ಟು ಹುಡುಕಿದರೂ ರೇಣುಕಾಸ್ವಾಮಿ ಮೊಬೈಲ್ ಮಾತ್ರ ಸಿಕ್ಕಿಲ್ಲ. ಅಗ್ನಿಶಾಮಕ ಠಾಣೆ ಅಧಿಕಾರಿಗಳಿಗೆ ಪೊಲೀಸರು ಮನವಿ ಸದ್ಯ ಮೊಬೈಲ್ ಪತ್ತೆ ಮಾಡಿಕೊಡುವಂತೆ ರಾಜಾಜಿನಗರ ಅಗ್ನಿಶಾಮಕ ಠಾಣೆ ಅಧಿಕಾರಿಗಳಿಗೆ ಪೊಲೀಸರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಮೊಬೈಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಲಿದೆ. ನಾಳೆ ಪರಪ್ಪನ ಅಗ್ರಹಾರ ಸೇರ್ತಾರಾ ದರ್ಶನ್? ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿ ಒಂಭತ್ತು ದಿನ ಕಳೆದಿದ್ದಾರೆ. ಜೂನ್ 11 ಮಂಗಳವಾರದಂದು ನಟನನ್ನು ಅರೆಸ್ಟ್ ಮಾಡಲಾಗಿತ್ತು. ಜೂನ್ 11 ರಿಂದ ಇಂದಿನವರೆಗೂ ನಟ, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಜೊತೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಸಿನಿಮಾ, ಶೂಟಿಂಗ್ ಅಂತಾ ಓಡಾಡುತ್ತಿದ್ದ ನಟನಿಗೆ ಈಗ ಪೊಲೀಸ್ ಠಾಣೆಯಲ್ಲಿ ವಾಸಿಸಬೇಕಾಗಿ ಬಂದಿದೆ. ಜೂನ್ 20ರಂದು ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ಜೂನ್ 20ರಂದು ದರ್ಶನ್ ಹಾಗೂ ಟೀಮ್ನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದು, ಪ್ರಕರಣದ ತನಿಖೆ ಸಂಬಂಧ ಪೇಪರ್ ವರ್ಕ್ ನಡೆಸಿದ್ದಾರೆ. ಇಂದು ಪೊಲೀಸರು ದರ್ಶನ್ ಆಂಡ್ ಗ್ಯಾಂಗ್ ವಿಚಾರಣೆ ಪೂರ್ಣಗೊಳಿಸಲಿದ್ದಾರೆ. ಇದನ್ನೂ ಓದಿ: ತನಿಖೆ ಪೂರ್ಣಗೊಂಡ ಹಿನ್ನೆಲೆ, ಪುನಃ ಕಸ್ಟಡಿಗೆ ಕೇಳದಿರಲು ಪೊಲೀಸರ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಬಹುತೇಕ ನಾಳೆ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲರು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸ್ ಕಮೀಷನರ್ ಬಿ. ದಯಾನಂದ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಗಿರೀಶ್ ಕೂಡ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದೆ. ಆರೋಪಿಗಳ ಕಸ್ಟಡಿ ನಾಳೆ ಅಂತ್ಯ ಹಿನ್ನೆಲೆಯಲ್ಲಿ ಇಂದು ಕೇಸ್ ಪ್ರಗತಿ, ತನಿಖೆ ಬಗ್ಗೆ ಕಮೀಷನರ್ ಮಾಹಿತಿ ಪಡೆಯಲಿದ್ದಾರೆ. ಠಾಣೆಯಲ್ಲಿ ಕುಸಿದು ಬಿದ್ದ ಪವಿತ್ರಾ ಗೌಡ ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಸ್ಟಡಿಯಲ್ಲಿದ್ದ ಪವಿತ್ರಾಗೌಡ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಠಾಣೆಗೆ ವೈದ್ಯರನ್ನು ಪೊಲೀಸರು ಕರೆಸಿದ್ದಾರೆ. ಕೂಡಲೇ ವೈದ್ಯರೊಂದಿಗೆ ಪವಿತ್ರಾ ಗೌಡರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ರು. ಹೀಗಾಗಿ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ರಾತ್ರಿ ವೇಳೆ ಪವಿತ್ರಾ ಗೌಡರನ್ನು ಸಾಂತ್ವನ ಕೇಂದ್ರಲ್ಲಿರಿಸಲಾಗುತ್ತಿತ್ತು. ಮತ್ತೆ ಬೆಳಗ್ಗೆ ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗುತ್ತಿತ್ತು. ಪವಿತ್ರಗೌಡರನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಕರೆತಂದಿದ್ದಾರೆ. ಇನ್ನೂ ವೈದ್ಯರು ಕೂಡಲೇ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಚಿಕಿತ್ಸೆ ಮುಗಿಯುತ್ತಿದ್ದಂತೆ ಮತ್ತೆ ಠಾಣೆಗೆ ಪವಿತ್ರಾ ಗೌಡರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. None
Popular Tags:
Share This Post:
What’s New
Spotlight
Today’s Hot
-
- January 7, 2025
-
- January 7, 2025
-
- January 7, 2025
Featured News
Latest From This Week
Subscribe To Our Newsletter
No spam, notifications only about new products, updates.